ಬಸವಾಪಟ್ಟಣ: ‘ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಟಲ್ ಪೆನ್ಷನ್ ಯೋಜನೆ, ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ, ಪ್ರಧಾನಮಂತ್ರಿ ಜೀವನ್ಜ್ಯೋತಿ ಬಿಮಾ ಯೋಜನೆಗಳ ಬಗ್ಗೆ ವಿವರವಾದ ಮಾಹಿತಿ ಪಡೆದು ವಿಮಾ ಯೋಜನೆಗಳ ಸದುಪಯೋಗ ಮಾಡಿಕೊಳ್ಳಬೇಕು’ ಎಂದು ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕಿನ ಪ್ರಾದೇಶಿಕ ವ್ಯವಸ್ಥಾಪಕ ಬಿ.ಎನ್.ಭಾಸ್ಕರ್ ಹೇಳಿದರು.
ಸಮೀಪದ ಮಲೆಕುಂಬ ಳೂರಿನ ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕಿನಲ್ಲಿ ಬುಧವಾರ ಏರ್ಪಡಿಸಿದ್ದ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.
‘ಬಡವರೂ ವಿಮಾ ಕಂತುಗಳನ್ನು ಸುಲಭವಾಗಿ ಪಾವತಿ ಮಾಡಲು ಅನುಕೂಲ ಕಲ್ಪಿಸಲಾಗಿದೆ. ರಾಷ್ಟ್ರೀಕೃತ ಬ್ಯಾಂಕ್ಗಳು ಮತ್ತು ಗ್ರಾಮೀಣ ಬ್ಯಾಂಕುಗಳು ಇದರ ಸೌಲಭ್ಯವನ್ನು ಬಡಜನರಿಗೆ ಒದಗಿಸಲು ಸದಾ ಸಿದ್ಧರಿದ್ದು, ಪ್ರತಿಯೊಬ್ಬ ವಯಸ್ಕರು ವಿಮಾ ಪಾಲಿಸಿ ಪಡೆದುಕೊಳ್ಳಬೇಕು’ ಎಂದು ಭಾಸ್ಕರ್ ಹೇಳಿದರು.
ಹೊನ್ನಾಳಿ ಸಾಕ್ಷರತಾ ಕೇಂದ್ರದ ಅಧಿಕಾರಿ ತೇಜೇಶ್ವರ್ ಮಾತನಾಡಿ, ‘ದೇಶದಲ್ಲಿ ಮಹಿಳೆಯರು ಜನಸಂಖ್ಯೆಯ ಅರ್ಧದಷ್ಟಿದ್ದಾರೆ. ಆದರೆ ಸಾಕ್ಷರ ರಾಗದೇ ಇರುವುದರಿಂದ ದೇಶದ ಮಾನವಶಕ್ತಿ ಸಂಪನ್ಮೂಲ ನಷ್ಟವಾಗುತ್ತಿದೆ.