ಹೋಬಳಿ ಕೇಂದ್ರದ ಆಸ್ಪತ್ರೆಯಲ್ಲಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸಬೇಕು ಎಂಬ ನಿಯಮವಿದ್ದರೂ, ಸಂಜೆ 5 ರ ನಂತರ ಬೀಗ ಹಾಕಲಾಗುತ್ತಿದೆ. ಹೋಬಳಿಯಲ್ಲಿ ರಾತ್ರಿ ಅವಘಡಗಳು ಸಂಭವಿಸಿದರೂ, ಮೂಡಿಗೆರೆ ಅಥವಾ ಬೇಲೂರು ತಾಲ್ಲೂಕು ಆಸ್ಪತ್ರೆಗೆ ತೆರಳುವ ಸ್ಥಿತಿಯಿದೆ.
ಆಸ್ಪತ್ರೆಯ ಕಟ್ಟಡ ಶಿಥಿಲಗೊಂಡಿದ್ದು, ಆಸ್ಪತ್ರೆಯ ಆವರಣವೇ ಅಶುಚಿತ್ವದಿಂದ ಕೂಡಿದೆ. ಆಸ್ಪತ್ರೆಯ ಅವ್ಯವಸ್ಥೆಯಿಂದ ಜನಪ್ರತಿನಿಧಿಗಳು ಜನರಿಗೆ ಉತ್ತರಿಸಲಾಗದ ಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಇಲ್ಲಿನ ಸಮಸ್ಯೆಗಳನ್ನು ನಿವಾರಿಸಬೇಕು ಎಂದರು.
ನವಕರ್ನಾಟಕ ಯುವ ಶಕ್ತಿ ಸಂಘದ ಜಿಲ್ಲಾಧ್ಯಕ್ಷ ಸತೀಶ್ ಮಾತನಾಡಿ, ಆಸ್ಪತ್ರೆ ಸಮಸ್ಯೆ ಬಗೆಹರಿಸಲು ಹಿಂದೆ ಪ್ರತಿಭಟನೆ ನಡೆಸಿದ್ದು, ಇದೀಗ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದರು.
ಜಿಲ್ಲಾ ವೈದ್ಯಾಧಿಕಾರಿ ಡಾ. ಮಲ್ಲಿ ಕಾರ್ಜುನ್ ಮಾತನಾಡಿ, ತಕ್ಷಣದಿಂದಲೇ ಶಶ್ರೂಷಕಿಯರನ್ನು ನಿಯೋಜಿಸಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸು ವಂತೆ ಕ್ರಮ ಕೈಗೊಳ್ಳಬೇಕು. ಶಿಥಿಲ ಗೊಂಡಿರುವ ಕಟ್ಟಡದ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಗೋಣಿಬೀಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿಪ್ರಕಾಶ್, ಸದಸ್ಯರಾದ ಜೆ.ಎಸ್. ಸುಧೀರ್, ವರದೇಗೌಡ, ಜೆ.ಎಸ್. ರಘು, ವಿಜೇಂದ್ರ, ಗಂಗಾಧರ್ ಮುಂತಾದವರಿದ್ದರು.