ಕೇಂದ್ರ ಸರ್ಕಾರ ಇತ್ತೀಚೆಗೆ ದಿನಗೂಲಿ ನೌಕರರಿಗೆ ಹಾಗೂ ಗುತ್ತಿಗೆ ಆಧಾರದಲ್ಲಿ ದುಡಿಯು ತ್ತಿರುವ ಕಾರ್ಮಿಕರಿಗೆ ಕನಿಷ್ಠ ವೇತನ ವನ್ನು ಶೇ 43ರಷ್ಟು ಏರಿಕೆ ಮಾಡಿದೆ. ಆದರೆ, ಗೇರುಬೀಜ ಕಾರ್ಖಾನೆಯಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಕಳೆದ 5ವರ್ಷಗಳಿಂದ ವೇತನವನ್ನು ಪರಿಷ್ಕರಿಸಲಿಲ್ಲ ಎಂದು ದೂರಿದರು.
ಭಾರತೀಯ ಮಜ್ದೂರ್ ಸಂಘದ ಮೂಲಕ ಕನಿಷ್ಠ ವೇತನ ಸಲಹಾ ಸಮಿತಿಯಲ್ಲಿ ವೇತನ ಹೆಚ್ಚಳಕ್ಕೆ ಆಗ್ರಹಿಸಲಾಗಿದೆ. ಈ ಕುರಿತು ಒಂದು ಉಪಸಮಿತಿ ರಚಿಸಲಾಗಿದೆ ಎಂದು ಹೇಳಲಾಗಿದ್ದರೂ ಈ ತನಕ ಉಪಸಮಿತಿ ಕಾರ್ಯೋನ್ಮುಖವಾಗದಿರುವುದು ಬೇಸರದ ಸಂಗತಿ. ಹೀಗಾಗಿ, ಶಾಸಕರು ವಿಧಾನಸಭೆಯಲ್ಲಿ ಈ ಕುರಿತು ಕಾರ್ಮಿಕ ಸಚಿವರ ಗಮನಸೆಳೆದು ಕಾರ್ಮಿಕರ ವೇತನ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಸಂಘದ ಅಧ್ಯಕ್ಷ ಕೆ. ವಿಶ್ವನಾಥ ಶೆಟ್ಟಿ ನೇತೃತ್ವದಲ್ಲಿ ಮನವಿ ಸಲ್ಲಿಸಿದರು.
ಸಂಘದ ಉಪಾಧ್ಯಕ್ಷೆ ಸರಸ್ವತಿ, ಸಂಘಟನಾ ಕಾರ್ಯದರ್ಶಿ ಕರುಣಾಕರ ಪೂಜಾರಿ, ಚಂದ್ರಹಾಸ ಶೆಟ್ಟಿ ಮೊದಲಾ ದವರು ಉಪಸ್ಥಿತರಿದ್ದರು.