ಎಲ್ಲ ವೈದ್ಯಾಧಿಕಾರಿ ಗಳು ಪ್ರತಿ ವಾರಕೊಮ್ಮೆ ಪರಿಶೀಲಿಸ ಬೇಕು. ಪ್ರತಿ ಗುರುವಾರ ನಡೆಯುವ ಲಸಿಕಾ ಕೇಂದ್ರಗಳಿಗೆ ವೈದ್ಯಾಧಿಕಾರಿಗಳು ಭೇಟಿ ನೀಡಿ ಲಸಿಕೆಯ ಗುಣಮಟ್ಟ ಪರಿಶೀಲಿಸಬೇಕು. ಈ ಬಗ್ಗೆ ಜಿಲ್ಲಾ ಕಚೇರಿಗೆ ವರದಿ ಸಲ್ಲಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಕೆ.ಎಂ. ವಿಶ್ವೇಶ್ವರಯ್ಯ ಅವರು ಮಾತನಾಡಿ, ಮೂರು ದಿನದ ಲಸಿಕಾ ತರಬೇತಿ ಕಾರ್ಯಾಗಾರದಲ್ಲಿ ವೈದ್ಯಾಧಿಕಾರಿಗಳಿಗೆ ಪ್ರಸಕ್ತ ಸಾಲಿನಡಿ ಲಸಿಕಾ ಕ್ರಿಯಾ ಯೋಜನೆ ತಯಾರಿಸುವ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಗಿರಿಜನ ಪ್ರದೇಶ ಒಳಗೊಂಡಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೂಕ್ತ ಕ್ರಿಯಾಯೋಜನೆ ರಚಿಸಬೇಕು ಎಂದು ಹೇಳಿದರು.
ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯ ಮಕ್ಕಳ ತಜ್ಞ ಡಾ.ವಿದ್ಯಾಸಾಗರ್ ಮಾತ ನಾಡಿ, ಯಾವ ಸಮಯದಲ್ಲಿ ಯಾವ ಲಸಿಕೆ ನೀಡಬೇಕು ಹಾಗೂ ಲಸಿಕೆಯಿಂದ ತಡೆಗಟ್ಟುವ ರೋಗಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಾಗಾರದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಹಾಗೂ ಜಿಲ್ಲಾ ಲಸಿಕಾ ಮೇಲ್ವಿಚಾರಕರು ಹಾಜರಿದ್ದರು.