ಚೆನ್ನೈ: ಏಪ್ರಿಲ್ 12ರಂದು ತಮಿಳುನಾಡಿನಲ್ಲಿ ಉಪಚುನಾವಣೆ ನಡೆಯಲಿದ್ದು, ‘ಮುಂಬರುವ ಚುನಾವಣೆಯಲ್ಲಿ ನನ್ನ ಬೆಂಬಲ ಯಾರಿಗೂ ಇಲ್ಲ’ ಎಂದು ಸೂಪರ್ಸ್ಟಾರ್ ರಜನಿಕಾಂತ್ ಟ್ವೀಟ್ ಮಾಡಿದ್ದಾರೆ.
ಎಐಎಡಿಂಎಕೆ ಎರಡು ಪಕ್ಷಗಳಾಗಿ ಇಬ್ಬಾಗೊಂಡು ಹೊಸ ಚಿಹ್ನೆ ಮತ್ತು ಹೆಸರು ಪಡೆದುಕೊಂಡಿದ್ದು, ಉಪಚುನಾವಣಾ ಕ್ಷೇತ್ರವನ್ನು ಪ್ರತಿಷ್ಠೆಯ ಕಣವಾಗಿಸಿಕೊಂಡಿವೆ.
ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಆರ್.ಕೆ ನಗರ ವಿಧಾನಸಭಾ ಕ್ಷೇತ್ರಕ್ಕೆ ಏ.12ರಂದು ಉಪಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ರಜನಿಕಾಂತ್ ಯಾರಿಗೂ ಬೆಂಬಲವಿಲ್ಲ ಎನ್ನುವ ಮೂಲಕ ವಿವಾದಗಳಿಂದ ದೂರ ಉಳಿಯಲು ಪ್ರಯತ್ನಿಸಿದ್ದಾರೆ.