ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟದ (ಕೆಎಂಎಫ್) ಅಧ್ಯಕ್ಷರಾಗಿದ್ದ ಪಿ.ನಾಗರಾಜ ರಾಜೀನಾಮೆ ಅಂಗೀಕಾರ ಕುರಿತು ಚರ್ಚಿಸಲು ಇದೇ 25ರಂದು ಕರೆದಿರುವ ಸಭೆಯ ನಡಾವಳಿಗಳು ಕೋರ್ಟ್ ಆದೇಶಕ್ಕೆ ಒಳಪಡತಕ್ಕದ್ದು ಎಂದು ಹೈಕೋರ್ಟ್ ಹೇಳಿದೆ.
ಈ ಸಂಬಂಧ ನಾಗರಾಜ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ರವಿ ಮಳಿಮಠ ಅವರಿದ್ದ ಏಕಸದಸ್ಯ ಪೀಠ ಗುರುವಾರ ವಿಚಾರಣೆ ನಡೆಸಿ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೆ ಆದೇಶಿಸಿತು.
ಉದ್ದೇಶಿತ ಸಭೆಗೆ ತಡೆ ನೀಡುವಂತೆ ಕೋರಿದ ಅರ್ಜಿದಾರರ ಕೋರಿಕೆಯನ್ನು ಮಾನ್ಯ ಮಾಡದ ನ್ಯಾಯಮೂರ್ತಿ, ‘ಸಭೆಯಲ್ಲಿ ಯಾವುದೇ ನಿರ್ಧಾರ ಕೈಗೊಂಡರೂ ಅದು ಕೋರ್ಟ್ನ ಅಂತಿಮ ಆದೇಶಕ್ಕೆ ಬದ್ಧವಾಗಿರತಕ್ಕದ್ದು’ ಎಂದು ಸೂಚಿಸಿದರು.