ಬೆಂಗಳೂರು: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಮೊದಲ ಕುಲಪತಿಯಾಗಿ ಪ್ರೊ.ಬಿ.ತಿಮ್ಮೇಗೌಡ ಅಧಿಕಾರ ವಹಿಸಿಕೊಂಡಿದ್ದಾರೆ.
ತಿಮ್ಮೇಗೌಡ ಅವರು ಈ ಹಿಂದೆ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಆಗಿದ್ದರು. ಕಳೆದ ಫೆ.6ರಂದು ಅವರ ಅಧಿಕಾರ ಅವಧಿ ಮುಗಿದಿತ್ತು. ಸದ್ಯ ಅವರು ಮಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ.
ಈ ವಿಶ್ವವಿದ್ಯಾಲಯವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತದೆ. ಗದಗದಲ್ಲಿ ಸ್ಥಾಪನೆ ಆಗುತ್ತಿರುವ ವಿಶ್ವವಿದ್ಯಾಲಯದ ಆಡಳಿತ ಕಚೇರಿ ಬೆಂಗಳೂರಿನಲ್ಲಿದೆ.