ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೇಯಸ್‌ ಅಯ್ಯರ್‌ಗೆ ಬುಲಾವ್

Last Updated 23 ಮಾರ್ಚ್ 2017, 19:30 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಮುಂಬೈ ರಣಜಿ ತಂಡದ ಆಟಗಾರ ಶ್ರೇಯಸ್ ಅಯ್ಯರ್ ಅವರನ್ನು  ಧರ್ಮಶಾಲಾದಲ್ಲಿ ನಡೆಯಲಿರುವ ಬಾರ್ಡರ್–ಗಾವಸ್ಕರ್ ಟ್ರೋಫಿಯ ನಾಲ್ಕನೇ ಟೆಸ್ಟ್‌ ಪಂದ್ಯದಲ್ಲಿ ತಂಡಕ್ಕೆ ಕರೆಸಿಕೊಳ್ಳಲಾಗಿದೆ.

ನಾಯಕ ವಿರಾಟ್ ಕೊಹ್ಲಿ ಅವರು ಭುಜದ ಗಾಯದಿಂದ ಬಳಲುತ್ತಿರುವುದರಿಂದ  ಪಂದ್ಯದಲ್ಲಿ ಆಡುವುದು ಖಚಿತವಾಗಿಲ್ಲ.   ಆದ್ದರಿಂದ ಶ್ರೇಯಸ್‌ ಅವರನ್ನು ತಂಡಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ.

ಮುಂಬೈ ತಂಡದ ಪರ 38 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿರುವ ಬಲಗೈ ಬ್ಯಾಟ್ಸ್‌ಮನ್ ಶ್ರೇಯಸ್, 3306 ರನ್‌ ಗಳಿಸಿದ್ದಾರೆ. ಅದರಲ್ಲಿ ಒಟ್ಟು ಒಂಬತ್ತು ಶತಕ ಮತ್ತು 16 ಅರ್ಧಶತಕಗಳು ಸೇರಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT