‘ಕೊಹ್ಲಿ ಆತ್ಮಗೌರವಕ್ಕೆ ಧಕ್ಕೆ ತಂದ ಬಿಸಿಸಿಐ’
ಡಿಆರ್ಎಸ್ ವಿವಾದದಲ್ಲಿ ಕ್ರಿಕೆಟ್ ಆಸ್ಟ್ರೇಲಿಯಾದೊಂದಿಗೆ ರಾಜಿ ಮಾಡಿಕೊಳ್ಳುವ ಮೂಲಕ ಬಿಸಿಸಿಐ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಆತ್ಮಗೌರವಕ್ಕೆ ಧಕ್ಕೆ ಉಂಟು ಮಾಡಿದೆ ಎಂದು ಬಿಸಿಸಿಐ ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗುರುವಾರ ಕ್ರಿಕೆಟ್ ಆಸ್ಟ್ರೇಲಿಯಾ ಮುಖ್ಯಸ್ಥ ಜೇಮ್ಸ್ ಸದರ್ಲೆಂಡ್ ಅವರು, ‘ವಿರಾಟ್ಗೆ ಕ್ಷಮೆ ಎನ್ನುವ ಪದವೇ ಗೊತ್ತಿಲ್ಲ’ಎಂದು ಟೀಕಿಸಿರುವುದಕ್ಕೆ ಠಾಕೂರ್ ಟ್ವೀಟರ್ ಮೂಲಕ ಪ್ರತಿಕ್ರಿಯಿಸಿದ್ದಾರೆ.