ಬೆಂಗಳೂರು: ಸಂಸದ ಪ್ರತಾಪ್ ಸಿಂಹ ಅವರು ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಪ್ರಭಾ ಬೆಳವಂಗಲ ಅವರು ನಗರ ಪೊಲೀಸ್ ಕಮಿಷನರ್ ಪ್ರವೀಣ್ ಸೂದ್ ಅವರಿಗೆ ದೂರು ಕೊಟ್ಟಿದ್ದಾರೆ.
ಗುರುವಾರ ಸೂದ್ ಅವರನ್ನು ಭೇಟಿಯಾದ ಪ್ರಭಾ, ‘ಪ್ರತಾಪ್ ಸಿಂಹ ಅವರು ಕೆಲ ಸುದ್ದಿ ವಾಹಿನಿಗಳಲ್ಲಿ ನನ್ನ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ಮನವಿ ಮಾಡಿದ್ದಾರೆ.
ಫೇಸ್ಬುಕ್ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಕಳುಹಿಸುವ ಮೂಲಕ ಪ್ರಭಾ ಅವರು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಅರೋಪಿಸಿ ಪ್ರತಾಪ್ ಬುಧವಾರ ಕಮಿಷನರ್ಗೆ ದೂರು ಸಲ್ಲಿಸಿದ್ದರು.