ಬದಲಾವಣೆಗೆ ದಿಟ್ಟ ನಡಿಗೆ: ‘ಸಾಮಾಜಿಕ ಬದಲಾವಣೆಗೆ ಮಹಿಳೆಯರ ದಿಟ್ಟ ನಡಿಗೆ’ ಜಾಗೃತಿ ಜಾಥಾಕ್ಕೆ ನಗರದ ದೂರದರ್ಶನ ಕೇಂದ್ರದ ಸಹ ನಿರ್ದೇಶಕಿ ನಿರ್ಮಲಾ ಎಲಿಗಾರ್ ಚಾಲನೆ ನೀಡಿದರು. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭ ಮಾತನಾಡಿ, ‘ನಮ್ಮ ಶಿಕ್ಷಣ ವ್ಯವಸ್ಥೆಯಿಂದ ಮಕ್ಕಳು ಒತ್ತಡ ಅನುಭವಿಸುತ್ತಿದ್ದಾರೆ. ಎಲ್ಲ ಮಕ್ಕಳಲ್ಲೂ ಸ್ಕೌಟ್ಸ್ ಮತ್ತು ಗೈಡ್ಸ್ ಮಾದರಿಯ ಜೀವನಶೈಲಿ, ಶಿಸ್ತು ಬೆಳೆಸಬೇಕಿದೆ. ಇದಕ್ಕೆ
ಪೋಷಕರು ಪ್ರೋತ್ಸಾಹ ನೀಡಬೇಕು’ ಎಂದರು.