ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಡಪ್ರಭು ಕೆಂಪೇಗೌಡ ಪತ್ತಿನ ಸಹಕಾರ ಸಂಘದ ಉದ್ಘಾಟನೆ

Last Updated 24 ಮಾರ್ಚ್ 2017, 4:43 IST
ಅಕ್ಷರ ಗಾತ್ರ

ಚಿಕ್ಕನಾಯಕನಹಳ್ಳಿ: ನಾಡಪ್ರಭು ಕೆಂಪೇಗೌಡ ಪತ್ತಿನ ಸಹಕಾರ ಸಂಘದ ಉದ್ಘಾಟನಾ ಸಮಾರಂಭ ಮಾ. 25ರರಂದು ಬೆಳಿಗ್ಗೆ 10.35ಕ್ಕೆ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದೆ ಎಂದು ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಡಾ.ಎಸ್.ಜಿ.ಪರಮೇಶ್ವರಪ್ಪ ತಿಳಿಸಿದರು.

ಮಾಯಸಂದ್ರ ಆದಿಚುಂಚನಗಿರಿ ಶಾಖಾ ಮಠದ ಪ್ರಸನ್ನನಾಥ ಸ್ವಾಮಿಜಿ ಸಾನ್ನಿಧ್ಯ, ಪಟ್ಟನಾಯಕನಹಳ್ಳಿ ನಂಜಾವಧೂತಸ್ವಾಮೀಜಿ, ದಸರೀಘಟ್ಟಚಂದ್ರಶೇಖರನಾಥ ಸ್ವಾಮೀಜಿ ವಹಿಸಲಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಅಧ್ಯಕ್ಷತೆ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಡಾ.ಎಸ್.ಜಿ.ಪರಮೇಶ್ವರಪ್ಪ. ಉದ್ಘಾಟನೆ  ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ.ನಾಮಪಲಕ ಅನಾವರಣ ಸಂಸದ ಎಸ್.ಪಿ.ಮುದ್ದಹನುಮೇಗೌಡ ನೆರವೇರಿಸುವರು ಎಂದು ವಿವರ ನೀಡಿದರು.

ಜಿಲ್ಲಾ ಸದಸ್ಯರಾದ ರಾಮಚಂದ್ರಯ್ಯ, ಮಂಜುಳ, ಪುರಸಭಾಧ್ಯಕ್ಷ ಹೆಚ್.ಬಿ.ಪ್ರಕಾಶ್, ಸದಸ್ಯ ರಾಜಶೇಖರ್, ಕೆ.ಜಿ.ಕೃಷ್ಣೆಗೌಡ, ತಾ.ಪಂ.ಸದಸ್ಯ ಚಂದ್ರಶೇಖರ್, ಇಂದಿರಾಕುಮಾರಿ ಅವರನ್ನು ಸನ್ಮಾನಿಸಲಾಗುವುದು ಎಂದರು.

ವಿಶೇಷ ಆಹ್ವಾನಿತರಾಗಿ ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಲೋಕೇಶ್, ಇಂಜನಿಯರ್ ಮಂಜುನಾಥ್, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ನರೇಂದ್ರಬಾಬು, ಎಸ್‌ಜಿ.ಎಂ ಪಬ್ಲಿಕ್‌ಸ್ಕೂಲ್ ಸಂಸ್ಥಾಪಕ ಹನುಮಂತರಾಯಪ್ಪ, ರಾಜ್ಯ ಒಕ್ಕಲಿಗರ ಸಂಘದ ಮಾಜಿ ನಿರ್ದೇಶಕ ಬೆಲವತ್ತ ಜಗದೀಶ್, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಬಿ.ಎನ್.ಲೋಕೇಶ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ರಾಜಕುಮಾರ್.ಎಸ್ ಮತ್ತಿತರರು ಭಾಗವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕಾರ್ಮಿಕ ಘಟಕದ ಅಧ್ಯಕ್ಷ ರಂಗಪ್ಪ, ವಕೀಲ ಸದಾಶಿವಪ್ಪ, ಸಮಾಜ ಸೇವಕ ರವಿಕುಮಾರ್.ಡಿ.ಬಿ, ತಾ.ಒಕ್ಕಲಿಗರ ಸಂಘದ ಕಾರ್ಯದರ್ಶಿ ರಾಜಣ್ಣ, ಕಂಟಲಗೆರೆ ನಾರಾಯಣಪ್ಪ, ಗೋವಿಂದಯ್ಯ, ಈಶ್ವರಯ್ಯ, ಕೆ.ಸುಮಿತ್ರ ಉಪಸ್ಥಿತರಿರುವರು ಎಂದು ಮಾಹಿತಿ ನೀಡಿದರು.

ಗೋಷ್ಠಿಯಲ್ಲಿ ಕೆಂಪೇಗೌಡ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ.ಪಿ.ಹರೀಶ್, ಗೌರವಾಧ್ಯಕ್ಷ ನಿರ್ವಾಣಯ್ಯ(ಮಲ್ಲೇಶಪ್ಪ), ಕಾರ್ಯದರ್ಶಿ ಕಿರಣ್‌ನಿಶಾನಿ, ಪುರಸಭಾ ನಾಮಿನಿ ಸದಸ್ಯ ಕೆ.ಜಿ.ಕೃಷ್ಣೆಗೌಡ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT