ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಶಿಕ್ಷಣ ಪಡೆದು ಅಭಿವೃದ್ಧಿ ಹೊಂದಿ’

ಕುಂಬಾರ ಸಮಾಜದ ಸಹಕಾರ ಸಂಘದ ಉದ್ಘಾಟನಾ ಸಮಾರಂಭ
Last Updated 24 ಮಾರ್ಚ್ 2017, 6:08 IST
ಅಕ್ಷರ ಗಾತ್ರ

ವಿಜಯಪುರ: ಕುಂಬಾರ ಸಮಾಜ ಶೈಕ್ಷ ಣಿಕ, ಆರ್ಥಿಕ, ಸಾಮಾಜಿಕವಾಗಿ ಹಿಂದು ಳಿದಿದ್ದು ಸಮಾಜದ ಜನತೆ ಒಗ್ಗಟ್ಟಾಗಿ ಶಿಕ್ಷಣವಂತರಾಗಿ ಮುನ್ನಡೆ ಸಾಧಿಸಬೇಕು ಎಂದು ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತೆ ಡಾ.ಆರ್.ವಿ. ಮಂಜುಳಾ ಕಿವಿಮಾತು ಹೇಳಿದರು.

ನಗರದ ಡಾ.ಬಿ.ಆರ್‌.ಅಂಬೇಡ್ಕರ್ ಭವನದಲ್ಲಿ ಜರುಗಿದ ಕುಂಬಾರ ಸರ್ಕಾರಿ, ಅರೆ ಸರ್ಕಾರಿ ನೌಕರರ ಸಹಕಾರ ಸಂಘ ನಿಯಮಿತ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಸ್ವಾವಲಂಬಿ ಬದುಕಿಗೆ ಮಾರ್ಗ ತೋರಿಸಿ ಪ್ರಗತಿ ಸಾಧಿಸಬೇಕು ಎಂದರು. ಸಾನ್ನಿಧ್ಯ ವಹಿಸಿದ್ದ ತೆಲಸಂಗದ ಕುಂಬಾರ ಗುರುಪೀಠದ ಬಸವ ಕುಂಬಾರ ಗುಂಡಯ್ಯ ಸ್ವಾಮೀಜಿ ಆಶೀರ್ವಚನ ನೀಡಿದರು.

ಉಪ- ಮೇಯರ್ ಗೋಪಾಲ ಘಟ ಕಾಂಬಳೆ ಮಾತನಾಡಿ, ಕುಂಬಾರಿಕೆ ಕಲೆ ನಶಿಸಿ ಹೋಗುತ್ತಿದೆ, ಶ್ರೀಮಂತವಾದ ಕುಂಬಾರಿಕೆ ಕಲೆ ಉಳಿಸಿ ಬೆಳೆಸಿಕೊಂಡು ಹೋಗುವುದು ಎಲ್ಲರ ಕರ್ತವ್ಯವಾಗಿದ್ದು, ಇದಕ್ಕೆ ಪೂರಕವಾಗಿ ನಗರದಲ್ಲಿ ಕುಂಬಾ ರರ ಉತ್ಪನ್ನಗಳ ಮಾರಾಟಕ್ಕೆ ಸೂಕ್ತ ಸ್ಥಳಾವಕಾಶ ಒದಗಿಸಲು ಅಗತ್ಯ ನೆರವು  ನೀಡಲಾಗುವುದು ಎಂದರು.

ಶಂಕರ ಕುಂಬಾರ, ಗುರುರಾಜ್, ವಿವೇಕ, ಶ್ರೀಶೈಲ ಬಳಗಾನೂರ, ಚನ್ನ ಸಂಗಪ್ಪ, ಚಂದ್ರಶೇಖರ, ಕೃಷ್ಣ ಕಾಡಾ ಮಾಜಿ ಅಧ್ಯಕ್ಷ ಬಸವರಾಜ ಕುಂಬಾರ, ಬಸಣ್ಣ, ರಾಣಿ ಚನ್ನಮ್ಮ ಪ್ರಶಸ್ತಿ ಪುರಸ್ಕೃತ ರಾದ ಬಸಲಿಂಗಮ್ಮ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀಕಾಂತ, ತಾಳಿ ಕೋಟೆ ಎಪಿಎಂಸಿ ಸದಸ್ಯ ಮಹಾ ದೇವಪ್ಪ ಅವರನ್ನು ಸನ್ಮಾನಿಸಿ ಗೌರವಿಸ ಲಾಯಿತು.  ಸಂಘದ ಅಧ್ಯಕ್ಷ ಎಸ್.ಜಿ. ಕುಂಬಾರ ಅಧ್ಯಕ್ಷತೆ ವಹಿಸಿದ್ದರು. ಎಸ್.ಎಸ್.ಕುಂಬಾರ ಸ್ವಾಗತಿಸಿದರು. ಚಂದ್ರಕಾಂತ ಕುಂಬಾರ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT