ಪ್ರಶ್ನೆ ಪತ್ರಿಕೆಗಳ ಸುರಕ್ಷತೆ ಬಗ್ಗೆ ಅಧಿಕಾರಿಗಳು ಇಲಾಖೆಯ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ವಿದ್ಯಾರ್ಥಿಗಳಿಗೆ ಗಾಳಿ, ಬೆಳಕು, ಕುಡಿಯುವ ನೀರು, ಪ್ರಥಮ ಚಿಕಿತ್ಸೆ ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕು.ಪರೀಕ್ಷಾ ಕೆಂದ್ರದ ಸುತ್ತಮುತ್ತಲೂ ಝೆರಾಕ್ಸ ಅಂಗಡಿ, ಮೊಬೈಲ್, ಎಲೆಕ್ಟ್ರಾನಿಕ್ಸ ವಸ್ತುಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ. ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗೆ ಮೊಬೈಲ್ ತರುವಂತಿಲ್ಲ ಎಂದು ಸಿಇಒ ಹೇಳಿದರು.
ಪರೀಕ್ಷಾ ಸಮಯದಲ್ಲಿ ಕರ್ತವ್ಯ ನಿರ್ವಹಿಸುವ ಸ್ಥಾನಿಕ ಜಾಗೃತ ದಳದವರು, ಕೊಠಡಿ ಮೇಲ್ವಿಚಾರಕರು, ಪ್ರಶ್ನೆ ಪತ್ರಿಕೆ ಪಾಲಕರು, ಒಟ್ಟಾರೆ ಪರೀಕ್ಷಾ ಸಿಬ್ಬಂದಿ ಮೊಬೈಲ್ ಫೋನನ್ನು ಮುಖ್ಯ ಅಧೀಕ್ಷಕರ ಸುಪರ್ದಿಗೆ ನೀಡಬೇಕು.
ಪರೀಕ್ಷಾ ಅವ್ಯವಹಾರ ಪ್ರಕರಣಗಳು ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಬಂದೋಬಸ್ತ್ ಒದಗಿಸಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ತಿಳಿಸಿದರು.