ಬೆಂಗಳೂರು: ರಾಜ್ಯದಲ್ಲಿ ನೀರಿನ ಸಮಸ್ಯೆ ಎದುರಾಗಿದ್ದು, ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯ ಸರ್ಕಾರ ತಿಳಿಸಿದೆ.
‘ಕುಡಿಯು ನೀರಿಗೂ ಅಭಾವ ಉಂಟಾಗಿದೆ. ಬೆಂಗಳೂರು, ಮೈಸೂರು ಹಾಗೂ ಸುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಕೆಗೆ 3–4 ಟಿಎಂಸಿ ನೀರು ಕೊರತೆ ಉಂಟಾಗಿದೆ.
‘ಸದ್ಯ ನೀರು ಹರಿಸುವ ಪ್ರಶ್ನೆಯೇ ಇಲ್ಲ ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ .ಪಾಟೀಲ ಪ್ರತಿಕ್ರಿಯಿಸಿದರು.
ಹಿಂದಿನ ಆದೇಶದಂತೆ ತಮಿಳುನಾಡಿಗೆ ಕರ್ನಾಟಕದಿಂದ ನಿತ್ಯ 2000 ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠ ಮಾರ್ಚ್ 21ರ ವಿಚಾರಣೆ ವೇಳೆ ಸೂಚಿಸಿತ್ತು.
ಕರ್ನಾಟಕ, ತಮಿಳುನಾಡು ಹಾಗೂ ಕೇರಳ ರಾಜ್ಯಗಳು ಸಲ್ಲಿಸಿರುವ ಪ್ರಕರಣದ ಅಂತಿಮ ವಿಚಾರಣೆಯನ್ನು ಜುಲೈ 11ರಂದು ನಡೆಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.