ನವದೆಹಲಿ: ಸೂಫಿ ಸಂತ ಖ್ವಾಜಾ ಮೊಯಿನುದ್ದೀನ್ ಚಿಸ್ತಿ ಅವರ ಅಜ್ಮೇರ್ ದರ್ಗಾಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಚಾದರ ಕಳುಹಿಸಿಕೊಟ್ಟಿದ್ದಾರೆ.
ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಖಾತೆಯ ರಾಜ್ಯ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಮತ್ತು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರಿಗೆ ಚಾದರವನ್ನು ಹಸ್ತಾಂತರಿಸಿದ ಮೋದಿ, ಮಾರ್ಚ್ 30ರಂದು ದರ್ಗಾದಲ್ಲಿ ನಡೆಯಲಿರುವ ಉರುಸ್ ಸಂದರ್ಭದಲ್ಲಿ ಅದನ್ನು ಅರ್ಪಿಸುವಂತೆ ಹೇಳಿದ್ದಾರೆ.
ಅದೇ ವೇಳೆ ಖ್ವಾಜಾ ಚಿಸ್ತಿ ಅವರ ಅನುಯಾಯಿಗಳಿಗೆ ಪ್ರಧಾನಿ ಶುಭ ಹಾರೈಸಿದ್ದಾರೆ.