‘ಯಾದವ, ಕುರ್ಮಿ, ಲೋಧಾ ಸಮುದಾಯಗಳು ಸಾಮಾಜಿಕವಾಗಿ ಸ್ವಲ್ಪ ಪ್ರಮಾಣದ ಪ್ರಗತಿ ಸಾಧಿಸಿವೆ. ಎನ್ಸಿಬಿಸಿಯನ್ನು ‘ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ ಕೇಂದ್ರ ಆಯೋಗ’ ಎಂದು ಬದಲಿಸುವುದರ ಮೂಲಕ ಈ ಸಮುದಾಯಗಳಿಗೆ ನೀಡಲಾಗಿರುವ ಮೀಸಲಾತಿಯನ್ನು ರದ್ದು ಮಾಡಲಾಗುತ್ತದೆ. ಇದು, ಮೀಸಲಾತಿಯನ್ನು ಸಂಪೂರ್ಣವಾಗಿ ರದ್ದು ಮಾಡುವ ದೊಡ್ಡ ಸಂಚಿನ ಒಂದು ಭಾಗ’ ಎಂದು ಸಮಾಜವಾದಿ ಪಕ್ಷದ ರಾಮಗೋಪಾಲ್ ಯಾದವ್ ರಾಜ್ಯಸಭೆಯಲ್ಲಿ ಹೇಳಿದರು.