ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಠಾಧೀಶರ ಪ್ರತಿಭಟನೆ

Last Updated 24 ಮಾರ್ಚ್ 2017, 19:55 IST
ಅಕ್ಷರ ಗಾತ್ರ

ಚಿತ್ರದುರ್ಗ: ಮುರುಘಾ ಶರಣರಿಗೆ ಬೆದರಿಕೆ ಕರೆ ಮಾಡಿರುವವರನ್ನು ಬಂಧಿಸಬೇಕು. ಅಲ್ಲಿಯವರೆಗೆ ಶರಣರಿಗೆ ಭದ್ರತೆಯನ್ನು ಒದಗಿಸಬೇಕು ಎಂದು ಒತ್ತಾಯಿಸಿ ನಾಡಿನ ವಿವಿಧ ಮಠಾಧೀಶರು, ಸಂಘ ಸಂಸ್ಥೆಗಳ ಮುಖಂಡರು ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಹೆಚ್ಚುವರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ನಗರದ ನೀಲಕಂಠೇಶ್ವರ ದೇವಾಲಯದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಧಾರ್ಮಿಕ ಮುಖಂಡರು, ಜಿಲ್ಲಾಧಿಕಾರಿ ಕಚೇರಿ ಬಳಿ ಸಮಾವೇಶಗೊಂಡು, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
* * *
ವೈದ್ಯರ ಮೇಲೆ ಹಲ್ಲೆ: ಇಬ್ಬರ ಬಂಧನ
ಧಾರವಾಡ:
ತುರ್ತು ಚಿಕಿತ್ಸೆ ನೀಡದ ಕಾರಣಕ್ಕೆ ತಮ್ಮ ತಾಯಿ ಮೆಹಬೂಬ್‌ಬೀ ಗೋಲಂದಾಜ (70) ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಶುಕ್ರವಾರ ಜಿಲ್ಲಾಸ್ಪತ್ರೆಯ ಡಾ. ಬಿ.ಜಿ.ದೊಡ್ಡಮನಿ ಅವರ ಮೇಲೆ ಹಲ್ಲೆ ನಡೆಸಿದ ಸೋದರರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಗೋವನಕೊಪ್ಪದ ಇಮಾಮ್‌ ಹುಸೇನ್‌ ಗೋಲಂದಾಜ ಹಾಗೂ ಮೆಹಬೂಬ್‌ ಗೋಲಂದಾಜ ಅವರನ್ನು  ಬಂಧಿಸಲಾಗಿದೆ. ಘಟನೆ ಖಂಡಿಸಿ ಜಿಲ್ಲೆಯ ಎಲ್ಲ ಆಸ್ಪತ್ರೆಗಳನ್ನು ಶನಿವಾರ ಮತ್ತು ಸೋಮವಾರ ಬಂದ್‌ ಮಾಡಲು ಜಿಲ್ಲಾ ವೈದ್ಯಕೀಯ ಸಂಘ ತೀರ್ಮಾನಿಸಿದೆ. ತುರ್ತು ಚಿಕಿತ್ಸಾ ಘಟಕ ಮಾತ್ರ  ಕಾರ್ಯನಿರ್ವಹಿಸಲಿದೆ ಎಂದು ಸಂಘ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT