ಬೆಂಗಳೂರು: ನಗರದ ರೈಲು ನಿಲ್ದಾಣ ಬಳಿ ಗುರುವಾರ ಎದೆನೋವಿನಿಂದ ಬಳಲುತ್ತಿದ್ದ ಚಾಲಕನನ್ನು ಅವರದ್ದೇ ಟ್ಯಾಕ್ಸಿಯಲ್ಲಿ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿದ್ದ ಚಿಕ್ಕಪೇಟೆ ಸಂಚಾರ ಠಾಣೆ ಕಾನ್ಸ್ಟೆಬಲ್್ ಯೋಗೀಶ್ ಅವರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತವಾಗಿದೆ.
ಯೋಗೇಶ್ ಅವರು ಚಾಲಕನಿಗೆ ನೆರವಾಗುತ್ತಿರುವ
ಚಿತ್ರವು ‘ಪ್ರಜಾವಾಣಿ’ಯ ಶುಕ್ರವಾರದ ಸಂಚಿಕೆಯಲ್ಲಿ ಪ್ರಕಟವಾಗಿತ್ತು. ಆ ಚಿತ್ರವನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ನಗರ ಪೊಲೀಸ್ ಕಮಿಷನರ್ ಪ್ರವೀಣ್ ಸೂದ್, ‘ಒಳ್ಳೆಯ ಕೆಲಸ ಮಾಡಿದ್ದೀರಾ. ನಿಮ್ಮಂಥ ಸಿಬ್ಬಂದಿಯ ಸಂಖ್ಯೆ ಹೆಚ್ಚಾಗಲಿ’ ಎಂದಿದ್ದಾರೆ.
ಈ ಹೇಳಿಕೆಯನ್ನು ಮೆಚ್ಚಿ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್, ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಸೇರಿ 432 ಮಂದಿ ಟ್ವೀಟ್ ಮಾಡಿದ್ದಾರೆ.
ಟ್ವಿಟರ್ನಲ್ಲಿ ಈ ಪೋಸ್ಟ್ಗೆ 1,185 ಮಂದಿ ಲೈಕ್ ಮಾಡಿದ್ದಾರೆ. ಫೇಸ್ಬುಕ್ನಲ್ಲೂ 5 ಸಾವಿರ ಮಂದಿ ಇದನ್ನು ಲೈಕ್ ಮಾಡಿದ್ದು, 1 ಸಾವಿರ ಮಂದಿ ಶೇರ್ ಮಾಡಿದ್ದಾರೆ.