ಧರ್ಮಶಾಲಾ: ಬಾರ್ಡರ್–ಗಾವಸ್ಕರ್ ಟ್ರೋಫಿಯ ನಾಲ್ಕನೇ ಟೆಸ್ಟ್ ಪಂದ್ಯ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆಯ ಮೈದಾನದಲ್ಲಿ ಶನಿವಾರ ಆರಂಭವಾಗಿದೆ. ಮೊದಲು ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ರಾಂಚಿ ಟೆಸ್ಟ್ನಲ್ಲಿ ಫೀಲ್ಡಿಂಗ್ ಮಾಡುವ ವೇಳೆ ಬಲಭುಜಕ್ಕೆ ಗಾಯ ಮಾಡಿಕೊಂಡಿದ್ದ ಭಾರತ ಟೆಸ್ಟ್ ತಂಡದ ನಾಯಕ ಕೊಹ್ಲಿ ಇನ್ನೂ ಪೂರ್ಣವಾಗಿ ಗುಣಮುಖರಾಗಿಲ್ಲ. ಅವರು ಈ ಪಂದ್ಯದಲ್ಲಿ ಕಣಕ್ಕಿಳಿದಿಲ್ಲ. ಕೊಹ್ಲಿ ಅವರ ಅನುಪಸ್ಥಿತಿಯಲ್ಲಿ ಅಜಿಂಕ್ಯ ರಹಾನೆ ತಂಡವನ್ನು ಮುನ್ನಡೆಸಲ್ಲಿದ್ದಾರೆ.
ಶಮಿ, ಶ್ರೇಯಸ್ಗೆ ಸ್ಥಾನ
ಪಶ್ಚಿಮ ಬಂಗಾಳದ ವೇಗಿ ಮಹಮ್ಮದ್ ಶಮಿ ಮತ್ತು ಮುಂಬೈನ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ ಅವರು ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ಗೆ ಭಾರತ ತಂಡದಲ್ಲಿ ಸ್ಥಾನ ಗಳಿಸಿದ್ದಾರೆ.