ಕ್ಷಯ ರೋಗದ ಬಗ್ಗೆ ಗ್ರಾಮೀಣ ಭಾಗದಲ್ಲಿ ಅರಿವಿನ ಕೊರತೆ ಇದೆ. ಹೀಗಾಗಿ, ಹೆಚ್ಚು ಅರಿವು ಕಾರ್ಯಕ್ರಮಗಳನ್ನು ಹಳ್ಳಿಗಳಲ್ಲಿ ಹಮ್ಮಿಕೊಳ್ಳುವ ಮೂಲಕ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಕುಮಾರ್ ನಾಯ್ಕ್ ಮಾತನಾಡಿ, ಹಿಂದೆ ಕ್ಷಯ ರೋಗಕ್ಕೆ ಔಷಧಿ ಕೊರತೆ ಇತ್ತು. ಆದರೆ, ಈ ದಿನಗಳಲ್ಲಿ ಔಷಧಿ ಕೊರತೆ ಇಲ್ಲ. 2 ತಿಂಗಳಿಗಿಂತ ಹೆಚ್ಚು ಸಮಯದ ಕೆಮ್ಮು ಕಾಣಿಸಿಕೊಂಡಲ್ಲಿ ತಕ್ಷಣ ವೈದ್ಯರನ್ನು ಭೇಟಿ ಮಾಡಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನಪ್ಪ ಅಧ್ಯಕ್ಷತೆ ವಹಿಸಿ, ಆರೋಗ್ಯ ಇಲಾಖೆ ವತಿ ಯಿಂದ ಕ್ಷಯ ರೋಗದ ನಿಯಂತ್ರಣಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದರು.
ನಗರದ ತಾಲ್ಲೂಕು ಕಚೇರಿಯಿಂದ ಜಿಲ್ಲಾ ಆಸ್ಪತ್ರೆಯವರೆಗೆ ಕ್ಷಯರೋಗದ ಬಗ್ಗೆ ಜಾಗೃತಿ ಮೂಡಿಸುವ ಜಾಥಾ ನಡೆಸ ಲಾಯಿತು. ಜಿಲ್ಲಾ ಕ್ಷಯರೋಗ ನಿಯಂತ್ರ ಣಾ ಕೇಂದ್ರ ಅಧಿಕಾರಿ ಡಾ.ಬಾಲಕೃಷ್ಣ, ಆರೋಗ್ಯ ಶಿಕ್ಷಣಾಧಿಕಾರಿ ಜಲಜಾಕ್ಷಿ, ತ್ರಿವೇಣಿ ಕಿರಣ್ ಕುಮಾರ್ ಇದ್ದರು.