ರಾಜ್ಯದ ಚಿತ್ರಮಂದಿರಗಳಲ್ಲಿ ಅವರ ಚಿತ್ರ ಪ್ರದರ್ಶಿಸುವ ಯೋಗ್ಯತೆಯನ್ನು ಉಳಿಸಿಕೊಂಡಿಲ್ಲ. ಕನ್ನಡಿಗರು ಅದನ್ನು ನೋಡಲು ಇಚ್ಛಿಸುವುದಿಲ್ಲ. ಯಾವುದೇ ಕಾರಣಕ್ಕೂ ಬಾಹುಬಲಿ–2 ಚಿತ್ರವನ್ನು ರಾಜ್ಯದಲ್ಲಿ ಬಿಡುಗಡೆ ಮಾಡಲು ಅವಕಾಶ ಕೊಡಬಾರದು ಎಂದು ಕರವೇ ಹೋರಾಟ ನಡೆಸುತ್ತಿದೆ ಎಂದರು.
ಈ ಸಿನಿಮಾವನ್ನು ಯಾವುದೇ ಕಾರಣಕ್ಕೂ ಇಲ್ಲಿನ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ಬಿಡುವುದಿಲ್ಲ. ಈ ಬಗ್ಗೆ ಚಿತ್ರಮಂದಿರದ ಮಾಲೀಕರಿಗೂ ಮನವಿ ಸಲ್ಲಿಸಲಾಗಿದ್ದು, ಒಂದು ವೇಳೆ ಬಿಡುಗಡೆ ಮಾಡಿದ್ದೇ ಆದರೆ ಮುಂದೆ ಆಗುವ ಅನಾಹುತಗಳಿಗೆ ಚಿತ್ರಮಂದಿರದ ಮಾಲೀಕರೇ ನೇರ ಹೊಣೆಯಾಗುತ್ತಾರೆ ಎಂದು ಎಚ್ಚರಿಸಿದರು.
ಕರವೇ ತಾಲ್ಲೂಕು ಕಾರ್ಯಾಧ್ಯಕ್ಷ ಹಮಾಮ್ ಪ್ರಕಾಶ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಶ್ರೀನಗರಬಶೀರ್, ತಾಲ್ಲೂಕು ಖಜಾಂಚಿ ವಿಜಯಕುಮಾರ್, ನಗರ ಅಧ್ಯಕ್ಷ ಎಸ್.ಕೆ.ಸತೀಶ್, ಕಾರ್ಯದರ್ಶಿ ಜೋಗಳ್ಳಿಅಮ್ಮು, ನಗರ ಪ್ರಧಾನ ಕಾರ್ಯದರ್ಶಿ ಸುಬ್ರಮಣಿ, ಆನಂದ್ ಮತ್ತಿತರರು ಭಾಗವಹಿಸಿದ್ದರು.