ಕಳೆದ ಶನಿವಾರ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಮುಲಾಯಂ ಮತ್ತು ಶಿವಪಾಲ್ ಸಿಂಗ್ ಯಾದವ್ ಅವರು ಭಾಗವಹಿಸಿರಲಿಲ್ಲ. ಈ ಇಬ್ಬರಿಗೂ ಆಹ್ವಾನ ಇರಲಿಲ್ಲ ಎಂದು ಮೂಲಗಳು ಹೇಳಿವೆ.
ಕಾರ್ಯಕಾರಿಣಿ ನಂತರ ಮಾತನಾಡಿದ್ದ ಅಖಿಲೇಶ್, ಸೆ.30ರ ಒಳಗಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು ಎಂದು ಹೇಳಿದ್ದರು.