ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರಂತರ ಮನೆ ನವೀಕರಣ ಪೂರ್ಣ: ಉಮಾಶ್ರೀ

Last Updated 27 ಮಾರ್ಚ್ 2017, 19:37 IST
ಅಕ್ಷರ ಗಾತ್ರ

ಬೆಂಗಳೂರು: ಖ್ಯಾತ ಕಾದಂಬರಿಕಾರ ಶಿವರಾಂ ಕಾರಂತರ ಮನೆ ನವೀಕರಣ ಕಾರ್ಯ ಮುಗಿದಿದ್ದು, ಅವರು ಉಪಯೋಗಿಸುತ್ತಿದ್ದ ವಸ್ತುಗಳನ್ನು ಆ ಮನೆಯಲ್ಲಿ ಜೋಡಿಸಲಾಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ನ ಕೆ. ಅಬ್ದುಲ್‌ ಜಬ್ಬಾರ್‌ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ಕಾರಂತರು ಬಳಸುತ್ತಿದ್ದ ವಸ್ತುಗಳನ್ನು ಮೂಲ ಸ್ವರೂಪದಲ್ಲೇ ಉಳಿಸಿಕೊಳ್ಳಲು ತೀರ್ಮಾನಿಸಲಾಗಿದೆ. ಈ ಕೆಲಸ ಪ್ರಗತಿಯಲ್ಲಿದ್ದು, ಬಳಿಕ ಲೋಕಾರ್ಪಣೆ ಮಾಡಲಾಗುವುದು ಎಂದು ತಿಳಿಸಿದರು.

ಜ್ಞಾನಪೀಠ ಪ್ರಶಸ್ತಿಯನ್ನು ಪುತ್ತೂರು ತಾಲ್ಲೂಕು ಖಜಾನೆಯಲ್ಲಿ ಇಡಲಾಗಿದೆ. ಮನೆ ಲೋಕಾರ್ಪಣೆಗೊಂಡ ನಂತರ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT