ಬೆಂಗಳೂರು: ಖ್ಯಾತ ಕಾದಂಬರಿಕಾರ ಶಿವರಾಂ ಕಾರಂತರ ಮನೆ ನವೀಕರಣ ಕಾರ್ಯ ಮುಗಿದಿದ್ದು, ಅವರು ಉಪಯೋಗಿಸುತ್ತಿದ್ದ ವಸ್ತುಗಳನ್ನು ಆ ಮನೆಯಲ್ಲಿ ಜೋಡಿಸಲಾಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ತಿಳಿಸಿದರು.
ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ನ ಕೆ. ಅಬ್ದುಲ್ ಜಬ್ಬಾರ್ ಪ್ರಶ್ನೆಗೆ ಸಚಿವರು ಉತ್ತರಿಸಿದರು.
ಕಾರಂತರು ಬಳಸುತ್ತಿದ್ದ ವಸ್ತುಗಳನ್ನು ಮೂಲ ಸ್ವರೂಪದಲ್ಲೇ ಉಳಿಸಿಕೊಳ್ಳಲು ತೀರ್ಮಾನಿಸಲಾಗಿದೆ. ಈ ಕೆಲಸ ಪ್ರಗತಿಯಲ್ಲಿದ್ದು, ಬಳಿಕ ಲೋಕಾರ್ಪಣೆ ಮಾಡಲಾಗುವುದು ಎಂದು ತಿಳಿಸಿದರು.
ಜ್ಞಾನಪೀಠ ಪ್ರಶಸ್ತಿಯನ್ನು ಪುತ್ತೂರು ತಾಲ್ಲೂಕು ಖಜಾನೆಯಲ್ಲಿ ಇಡಲಾಗಿದೆ. ಮನೆ ಲೋಕಾರ್ಪಣೆಗೊಂಡ ನಂತರ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುವುದು ಎಂದರು.