‘ರಾಜ್ಯದ ಉತ್ತರ, ದಕ್ಷಿಣ ಹಾಗೂ ಕರಾವಳಿ ಒಳನಾಡಿನ ಕೆಲವೆಡೆ ಮಳೆ ಬರಲಿದೆ. ಈಗ ನಿರ್ಮಾಣಗೊಂಡಿರುವ ಮೇಲ್ಮೈ ಸುಳಿಗಾಳಿ ಪ್ರಬಲವಾಗಿಲ್ಲ. ಹಾಗಾಗಿ ಉತ್ತಮ ಮಳೆಯನ್ನು ನಿರೀಕ್ಷೆ ಮಾಡಲು ಸಾಧ್ಯವಿಲ್ಲ’ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ನಿರ್ದೇಶಕ ಸುಂದರ್ ಮೇತ್ರಿ ‘ಪ್ರಜಾವಾಣಿ’ಗೆ ತಿಳಿಸಿದರು.