ಗಾಯತ್ರಿಪುರಂನ ಸಚಿನ್ (24), ಜಗದೀಶ್ (31), ವಿನೋದ್ (28) ಹಾಗೂ ಅನಸೂಯಾ (45) ಬಂಧಿತರಾಗಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
ಪ್ರತಿ ಮೂರು ತಿಂಗಳಿಗೊಮ್ಮೆ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇಗುಲದ ಹುಂಡಿ ಹಣ ಎಣಿಕೆ ಮಾಡಲಾಗುತ್ತದೆ. ಕೆನರಾ ಬ್ಯಾಂಕ್ ಇದರ ಗುತ್ತಿಗೆ ಪಡೆದಿದ್ದು, ಮುಜರಾಯಿ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಪ್ರಕ್ರಿಯೆ ನಡೆಯುತ್ತದೆ. ಎಣಿಕೆಗೆ ಸ್ತ್ರೀಶಕ್ತಿ ಹಾಗೂ ಸ್ವಯಂ ಸೇವಕ ಸಂಘದ ಸದಸ್ಯರ ನೆರವು ಪಡೆಯಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.