ಬೆಂಗಳೂರು: ಇದೇ ವರ್ಷದ ಜುಲೈವರೆಗೆ ವಿವಿಧ ಇಲಾಖೆಗಳಲ್ಲಿ ಖರ್ಚು ಮಾಡಬೇಕಾದ ಒಟ್ಟು ₹48,729 ಕೋಟಿ ಮೊತ್ತದ ಲೇಖಾನುದಾನಕ್ಕೆ ವಿಧಾನಮಂಡಲದ ಉಭಯ ಸದನಗಳು ಮಂಗಳವಾರ ಒಪ್ಪಿಗೆ ನೀಡಿವೆ.
ಬಜೆಟ್ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡಿದ ಬಳಿಕ 4 ತಿಂಗಳ ವೆಚ್ಚಕ್ಕೆ ಸಂಬಂಧಿಸಿದ ಧನ ವಿನಿಯೋಗ ಮಸೂದೆ ಅಂಗೀಕಾರವಾಯಿತು.
ಇದಲ್ಲದೇ, ಬಜೆಟ್ನಲ್ಲಿ ಪ್ರಸ್ತಾಪಿಸಿದ ನೋಂದಣಿ ಮತ್ತು ಮುದ್ರಾಂಕ ಶುಲ್ಕ, ಮದ್ಯದ ಮೇಲೆ ತೆರಿಗೆ ಹಾಗೂ ವಾಹನ ನೋಂದಣಿ ಶುಲ್ಕ ಹೆಚ್ಚಳಕ್ಕೆ ಸಂಬಂಧಿಸಿದ ಮಸೂದೆಗಳಿಗೆ ಸದನದ ಒಪ್ಪಿಗೆ ಪಡೆಯಲಾಯಿತು.