ಈ ಶಾಲೆಗಳಲ್ಲಿ ಮಕ್ಕಳ ಮೇಲಿನ ದೌರ್ಜನ್ಯ, ಅಧಿಕ ಶುಲ್ಕ ಸಂಗ್ರಹ ತಡೆಯಲು ತಿದ್ದುಪಡಿ ತರಲಾಗುತ್ತಿದೆ ಎಂದು ತನ್ವೀರ್ ಸೇಠ್ ಹೇಳಿದರು.
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ‘ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರ’ ರಚಿಸಲಾಗುವುದು. ಶಾಲೆಗಳು ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಶುಲ್ಕ ಸಂಗ್ರಹ ಅಥವಾ ವರ್ಷಾಂತ್ಯದಲ್ಲಿ ಮರುಪಾವತಿ ಮಾಡುವುದಾಗಿ ಬೇರೆ ಯಾವುದೇ ರೀತಿಯಲ್ಲಿ ಹಣ ಸಂಗ್ರಹಿಸಿದಲ್ಲಿ ಪೋಷಕರು ಈ ಸಮಿತಿ ಮುಂದೆ ದೂರು ದಾಖಲಿಸಬಹುದು. ವಿಚಾರಣೆ ನಡೆಸಿದ ನಂತರ ಆರೋಪ ಸಾಬೀತಾದಲ್ಲಿ ₹ 10 ಲಕ್ಷ ದಂಡ ವಿಧಿಸಬಹುದಾಗಿದೆ ಎಂದರು.