‘ದೇಶದ್ರೋಹಿ ದೇವೇಗೌಡ ಎಂಬ ನಿಂದನಾತ್ಮಕ ಹೇಳಿಕೆಯನ್ನು ಬಿಜೆಪಿ ಕಾರ್ಯಕರ್ತ ಜಗದೀಶ್ ಮಾರ್ಚ್ 24ರಂದು ಫೇಸ್ಬುಕ್ನಲ್ಲಿ ಹಾಕಿದ್ದರು. ದೇವೇಗೌಡರಿಗೆ ಮಾನಹಾನಿ ಉಂಟು ಮಾಡುವಂತಹ ಹೇಳಿಕೆಗಳನ್ನು ಟ್ವಿಟರ್, ಫೇಸ್ಬುಕ್, ವಾಟ್ಸ್ಆ್ಯಪ್ನಲ್ಲಿ ಹಾಕುತ್ತ ಬರುತ್ತಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಯುವ ಜೆಡಿಎಸ್ ನಗರದ ಘಟಕದ ಅಧ್ಯಕ್ಷ ಎಚ್.ಎಂ. ರಮೇಶ್ ಗೌಡ ಒತ್ತಾಯಿಸಿದರು.