ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗೇಶ ಹೆಗಡೆಗೆ ಬಿ.ಎಚ್‌. ಶ್ರೀಧರ ಪ್ರಶಸ್ತಿ

Last Updated 1 ಏಪ್ರಿಲ್ 2017, 19:42 IST
ಅಕ್ಷರ ಗಾತ್ರ

ಶಿರಸಿ: ಹಿರಿಯ ಸಾಹಿತಿ ಬಿ.ಎಚ್. ಶ್ರೀಧರ ಸ್ಮರಣೆ ಯಲ್ಲಿ ನೀಡಲಾಗುವ ‘ಬಿ.ಎಚ್. ಶ್ರೀಧರ ಸಾಹಿತ್ಯ ಪ್ರಶಸ್ತಿ’ಗೆ ವಿಜ್ಞಾನ ಬರಹಗಾರ ನಾಗೇಶ ಹೆಗಡೆ ಅವರು ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹ 5,000 ನಗದು,  ಫಲಕ, ಸ್ಮರಣಿಕೆಯನ್ನು ಒಳಗೊಂಡಿದೆ. ಇದೇ 24ರಂದು ನಡೆಯುವ ಬಿ.ಎಚ್. ಶ್ರೀಧರ ಜನ್ಮದಿನದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ಚೆನ್ನೈ–ಮಡಗಾಂವ ನಡುವೆ ವಿಶೇಷ ರೈಲು
ಕಾರವಾರ: ಚೆನ್ನೈ ಸೆಂಟ್ರಲ್‌ ಹಾಗೂ ಮಡಗಾಂವ ನಡುವೆ ಏಪ್ರಿಲ್‌ 4ರಿಂದ ಜೂನ್‌ 6ರವರೆಗೆ ಬೇಸಿಗೆ ಕಾಲದ ವಿಶೇಷ ರೈಲು ಓಡಿಸಲು ಕೊಂಕಣ ರೈಲ್ವೆ ಮುಂದಾಗಿದೆ.

ಪ್ರತಿ ಮಂಗಳವಾರ ಚೆನ್ನೈ ಸೆಂಟ್ರಲ್‌ನಿಂದ ಸಂಜೆ 5.30ಕ್ಕೆ ಹೊರಡುವ ರೈಲು ಮರುದಿನ            ಸಂಜೆ         4 ಗಂಟೆಗೆ ಮಡಗಾಂವ ತಲುಪಲಿದೆ.
ಮರುಪ್ರಯಾಣದಲ್ಲಿ ಬುಧವಾರ (ಇದೇ 5 ರಿಂದ ಜೂನ್ 7 ರವರೆಗೆ) ಸಂಜೆ 5.15ಕ್ಕೆ ಮಡಗಾಂವದಿಂದ ಹೊರಟು ಗುರುವಾರ ಮಧ್ಯಾಹ್ನ 3.35ಕ್ಕೆ ಚೆನ್ನೈ ಸೆಂಟ್ರಲ್‌ ತಲುಪಲಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.

‘ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂಗೆ’
ಬಳ್ಳಾರಿ: ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಗಾಲಿ ಜನಾರ್ದನ ರೆಡ್ಡಿ ಹಾಗೂ ಅವರ ಒಡೆತನದ ಕಂಪೆನಿಯ ₹ 900 ಕೋಟಿಗೂ ಮಿಕ್ಕಿದ ಸ್ಥಿರ ಮತ್ತು ಚರಾಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡು, ಜಾರಿ ನಿರ್ದೇಶನಾಲ ಯವು (ಇ.ಡಿ) ಸಿಬಿಐ ನ್ಯಾಯಾಲ ಯದಲ್ಲಿ ದಾಖಲಿಸಿದ್ದ ದೋಷಾರೋಪ ಪಟ್ಟಿಯನ್ನು ಹೈಕೋರ್ಟ್ ರದ್ದು ಮಾಡಿದೆ. ಈ ತೀರ್ಪನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗುವುದು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖಂಡ ಎಸ್.ಆರ್‌.ಹಿರೇಮಠ ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT