ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಆರ್‍‍ಪಿಎಫ್ ಕಾವಲುಪಡೆ ಮೇಲೆ ದಾಳಿ: 6 ಮಂದಿಗೆ ಗಾಯ

Last Updated 3 ಏಪ್ರಿಲ್ 2017, 12:01 IST
ಅಕ್ಷರ ಗಾತ್ರ

ಶ್ರೀನಗರ: ಇಲ್ಲಿನ ಪಂಥಾ ಚೌಕ್‍ ಬಳಿಯಿರುವ ಸಿಆರ್‍‍ಪಿಎಫ್ ಕಾವಲುಪಡೆ ಮೇಲೆ ಸೋಮವಾರ ಮಧ್ಯಾಹ್ನ ಶಂಕಿತ ಉಗ್ರರು ದಾಳಿ ನಡೆಸಿದ್ದಾರೆ.

ಈ ದಾಳಿಯಲ್ಲಿ ಆರು ಮಂದಿ ಸಿಆರ್‍‌ಪಿಎಫ್ ಯೋಧರು ಗಾಯಗೊಂಡಿರುವುದಾಗಿ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಕಳೆದೆರಡು ದಿನಗಳಲ್ಲಿ ರಕ್ಷಣಾ ಪಡೆ ಮೇಲೆ ನಡೆದ ಎರಡನೇ ದಾಳಿ ಪ್ರಕರಣವಾಗಿದೆ ಇದು.

ನಮ್ಮ ಸೈನಿಕರು ಜಮ್ಮುವಿನಿಂದ ಶ್ರೀನಗರಕ್ಕೆ ಹೋಗುತ್ತಿದ್ದಾಗ ಉಗ್ರರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಆರು ಮಂದಿಗೆ ಗಾಯಗಳಾಗಿದ್ದು , ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಿಆರ್‍‌ಪಿಎಫ್ ಪಿಆರ್‍ಒ ಬಿ ಚೌಧರಿ ಹೇಳಿದ್ದಾರೆ.

ನಿನ್ನೆ ಪ್ರಧಾನಿ ನರಂದ್ರ ಮೋದಿ ಅವರು ಚೆನಾನಿ - ನಶ್ರಿ ಸುರಂಗ ಮಾರ್ಗವನ್ನು ಉದ್ಘಾಟನೆ ಮಾಡಲು ಬಂದಿದ್ದಾಗ ಜಮ್ಮು ಕಾಶ್ಮೀರದಲ್ಲಿ ಅರೆಸೈನಿಕ ದಳದ ಮೇಲೆ ಉಗ್ರರು ದಾಳಿ ನಡೆಸಿದ್ದರು. ಉಗ್ರರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಓರ್ವ ಪೊಲೀಸ್ ಸಾವಿಗೀಡಾಗಿದ್ದು  11 ಮಂದಿಗೆ ಗಾಯಗಳಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT