ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ‘ರಾಣಿ ಲಕ್ಷ್ಮೀಬಾಯಿ ಆತ್ಮ ರಕ್ಷಣಾ ಕಾರ್ಯಕ್ರಮ’ ಹಾಗೂ ‘ಯೋಗ ಶಿಕ್ಷಾ ಕಾರ್ಯಕ್ರಮ’ಗಳನ್ನು ಶಾಲೆಗಳಲ್ಲಿ ಕಡ್ಡಾಯಗೊಳಿಸಬೇಕು ಎಂದು ನಿರ್ಧರಿಸಲಾಗಿದೆ. ಖಾಸಗಿ ಶಾಲೆಗಳಲ್ಲಿ ವಿಧಿಸಲಾಗುತ್ತಿರುವ ಹೆಚ್ಚುವರಿ ಶುಲ್ಕಗಳಿಗೂ ಕಡಿವಾಣ ಹಾಕಲು ಕ್ರಮ ಕೈಗೊಳ್ಳುವ ಬಗ್ಗೆ ಚರ್ಚಿಸಿರುವ ಕುರಿತು ಸರ್ಕಾರದ ಉನ್ನತ ಮೂಲಗಳಿಂದ ತಿಳಿದು ಬಂದಿದೆ.