ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಡಿಬಂಡೆ: ಸಿಡಿಲು ಬಡಿದು ಬಾಲಕ ಸಾವು

Last Updated 6 ಏಪ್ರಿಲ್ 2017, 10:58 IST
ಅಕ್ಷರ ಗಾತ್ರ

ಗುಡಿಬಂಡೆ: ಸಿಡಿಲು ಬಡಿದು ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಎಲ್ಲೋಡು ಬಳಿಯ ಕಂಬಾಲಹಳ್ಳಿ ಬುಧವಾರ ಸಂಜೆ ನಡೆದಿದೆ.ತಾಲ್ಲೂಕಿನ ಕಂಬಾಲಹಳ್ಳಿ ಗ್ರಾಮದ ಗಂಗಪ್ಪನ ಮಗ ನಾಗರಾಜ (14) ಮೃತ ಬಾಲಕ.

ಬುಧವಾರ ಸಂಜೆ 5 ಗಂಟೆಯ ಸುಮಾರಿಗೆ ಗಾಳಿ ಸಹಿತ ಮಳೆ ಬಿದ್ದ ಸಂದರ್ಭದಲ್ಲಿ ಸಿಡಿಲು ಬಡಿದು ಸಾವನ್ನಪ್ಪಿದ್ದಾನೆ. ಕುರಿ ಮತ್ತು ದನ ಕರುಗಳನ್ನು ಕರೆದುಕೊಂಡು ಮನೆಗೆ ಹೊರಟಿದ್ದ ಸಂದರ್ಭದಲ್ಲಿ ಸಿಡಿಲು ಬಡಿದಿದೆ. ತಕ್ಷಣ ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಬರುವಷ್ಟರಲ್ಲಿ ಮೃತ ಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT