ಚೆನ್ನೈ: ತಮಿಳುನಾಡು ಆರೋಗ್ಯ ಸಚಿವ ಸಿ. ವಿಜಯ ಭಾಸ್ಕರ್ ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದಾರೆ.
ಅದೇ ವೇಳೆ ನಟ ಶರತ್ ಕುಮಾರ್ ಅವರ ನಿವಾಸದ ಮೇಲೂ ಐಟಿ ದಾಳಇ ನಡೆದಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.
ತಮಿಳನಾಡಿನ 20 ಪ್ರದೇಶಗಳಲ್ಲಿ ಮತ್ತು ತಮಿಳುನಾಡಿನ ಹೊರಗೆ 11 ಪ್ರದೇಶಗಳಲ್ಲಿ ಐಟಿ ದಾಳಿ ನಡೆದಿದೆ.
ಆರ್.ಕೆ ನಗರ್ ವಿಧಾನಸಭಾ ಕ್ಷೇತ್ರದಲ್ಲಿ ಏಪ್ರಿಲ್ 12ರಂದು ಉಪಚುನಾವಣೆ ನಡೆಯಲಿದ್ದು, ಚುನಾವಣೆಗೆ ಮುನ್ನ ಮತದಾರರರಿಗೆ ವಿಜಯ್ ಭಾಸ್ಕರ್ ಹಣ ಹಂಚಿದ್ದಾರೆ. ಈ ಹಿನ್ನೆಲೆಯಲ್ಲಿ ಇವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ ಎಂದು ಐಟಿ ಅಧಿಕಾರಿ ಹೇಳಿದ್ದಾರೆ.
ಕ್ವಾರಿ ವ್ಯವಹಾರಕ್ಕೆ ಸಂಬಂಧಪಟ್ಟಂತೆ ಕಳೆದ ಒಂದು ವರ್ಷದಿಂದ ಐಟಿ ಅಧಿಕಾರಿಗಳು ವಿಜಯ ಭಾಸ್ಕರ್ ಅವರ ಮೇಲೆ ನಿಗಾ ಇರಿಸಿದ್ದರು.