ಇದಕ್ಕೆ ಪಟ್ಟಣದ 2ನೇ ವಾರ್ಡಿನ ಸದಸ್ಯೆ ಲಕ್ಷ್ಮಿಕಾಂತಮ್ಮ ಖಂಡಿಸಿ, ಪಟ್ಟಣದಲ್ಲಿ ಬಹಳಷ್ಟು ಜನರು ಬಡವರಿದ್ದಾರೆ. ತಮ್ಮ ಜೀವನೋಪಾಯಕ್ಕಾಗಿ ಕೆಲವರು ತಳ್ಳುವ ಗಾಡಿಗಳಲ್ಲಿ ಹಣ್ಣು, ಹೂವು, ಬಳೆ ವ್ಯಾಪಾರ ವ್ಯಾಪಾರ ಮಾಡುತ್ತಿದ್ದಾರೆ. ಇವರಿಗೆ ಪಟ್ಟಣ ಪಂಚಾಯತಿ ವತಿಯಿಂದಲೇ ಗುರುತಿನ ಚೀಟಿ ನೀಡಿ ನಿತ್ಯ ₹ 10 ರಿಂದ ₹ 20 ಕರ ಸಹ ವಸೂಲಿ ಮಾಡುತ್ತಿದ್ದಾರೆ. ಆದರೆ ಏಕಾಏಕಿ ಅಧಿಕಾರಿಗಳು ರಾಜಕೀಯ ಪ್ರಭಾವಕ್ಕೆ ಒಳಗಾಗಿ ಅಂಗಡಿಗಳನ್ನು ತೆರವುಗೊಳಿಸುವುದು ಸರಿಯಲ್ಲ ಎಂದು ತಿಳಿಸಿದರು.