ಗುಂಡ್ಲುಪೇಟೆಯ ಅಣ್ಣೂರುಕೇರಿ ಗ್ರಾಮದಲ್ಲಿ ಕೆಲದಿನಗಳ ಹಿಂದಷ್ಟೇ ಸಾವಿಗೀಡಾಗಿದ್ದ ರೈತ ಚಿಕ್ಕಶೆಟ್ಟಿ ಅವರ ಪತ್ನಿ ಸಾವಿತ್ರಿ ಅವರಿಗೆ ₹1 ಲಕ್ಷದ ಚೆಕ್ ವಿತರಿಸುತ್ತಿರುವುದು ಸೆರೆಯಾಗಿದೆ. ಯಡಿಯೂರಪ್ಪ ಅವರ ಜತೆಯಲ್ಲಿ ಮಾಜಿ ಸಚಿವ ರೇಣುಕಾಚಾರ್ಯ ಹಾಗೂ ಪಕ್ಷದ ಬೆಂಬಲಿಗರೂ ಇದ್ದಾರೆ. ಸದ್ಯ ಈ ವಿಡಿಯೊ ಸಾಕಷ್ಟು ವೈರಲ್ ಆಗಿದ್ದು ವಿವಾದಕ್ಕೆ ಕಾರಣವಾಗಿದೆ.