ಶಾಸಕ ಎಸ್.ಸುರೇಶ್ ಕುಮಾರ್, ‘ಕಾರ್ಮಿಕ ಸಂಘಟನೆಗಳು ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು. ಅದಕ್ಕೆ ತಕ್ಕಂತೆ ಕೆಲಸವೂ ಮಾಡಬೇಕು’ ಎಂದು ಸಲಹೆ ನೀಡಿದರು. ಯುವ ಬ್ರಿಗೇಡ್ನ ಸಂಚಾಲಕ ಚಕ್ರವರ್ತಿ ಸೂಲಿಬೆಲೆ, ‘ಸಂಘಟನೆಗಳ ಮುಖಂಡರಲ್ಲಿ ಶ್ರದ್ಧೆ ಕಡಿಮೆಯಾಗುತ್ತಿದೆ. ನಾಯಕತ್ವಕ್ಕಾಗಿ ಪೈಪೋಟಿ ಇಲ್ಲದಿದ್ದಾಗ ಗುರಿಯನ್ನು ಸುಲಭವಾಗಿ ತಲುಪಬಹುದು’ ಎಂದರು.