ಇಸ್ಲಾಮಾಬಾದ್: ಭಾರತದ ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನದ ಸೇನಾ ನ್ಯಾಯಾಲಯ ಮರಣದಂಡನೆ ವಿಧಿಸಿದ್ದು, ಈ ಕ್ರಮ ದೇಶದ ವಿರುದ್ಧ ಪಿತೂರಿ ನಡೆಸುತ್ತಿರುವವರಿಗೆ ಎಚ್ಚರಿಕೆಯಾಗಲಿ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಹೇಳಿದರು.
ಪಾಕಿಸ್ತಾನದಲ್ಲಿ ಸೆರೆಯಲ್ಲಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರಿಗೆ ಬೇಹುಗಾರಿಕೆ ನಡೆಸಿರುವ ಆರೋಪದಲ್ಲಿ ಅಲ್ಲಿನ ಸೇನಾ ನ್ಯಾಯಾಲಯ ಮರಣದಂಡನೆ ವಿಧಿಸಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್, ದೇಶದ ವಿರುದ್ಧ ಸಂಚು ರೂಪಿಸುತ್ತಿರುವವರಿಗೆ ಈ ಕ್ರಮ ಎಚ್ಚರಿಕೆಯಾಗಲಿ ಎಂದರು.
ಪಾಕಿಸ್ತಾನ ಭಯೋತ್ಪಾದನೆಯ ವಿರುದ್ಧ ಹೋರಾಡುತ್ತಿರುವುದು ಜಗತ್ತಿಗೆ ತಿಳಿದಿದೆ. ಭಾರತ ಸರ್ಕಾರದ ಅನುಮತಿ ಮೇರೆಗೆ ಜಾಧವ್ ಪಾಕಿಸ್ತಾನ ಪ್ರವೇಶಿಸಿದ್ದಾರೆ. ಭಾರತವು ಪಾಕಿಸ್ತಾನದಲ್ಲಿ ಭಯೋತ್ಪಾದನೆಗೆ ನೀರೆರೆಯುತ್ತಿರುವುದರಲ್ಲಿ ಅನುಮಾನವಿಲ್ಲ ಎಂದು ಪ್ರತಿಕ್ರಿಯಿಸಿದರು.