ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಧವ್‌ಗೆ ವಿಧಿಸಿರುವ ಮರಣದಂಡನೆ ಪಿತೂರಿಗಾರರಿಗೆ ಎಚ್ಚರಿಕೆಯಾಗಲಿ: ಪಾಕಿಸ್ತಾನ ರಕ್ಷಣಾ ಸಚಿವ

Last Updated 11 ಏಪ್ರಿಲ್ 2017, 6:58 IST
ಅಕ್ಷರ ಗಾತ್ರ

ಇಸ್ಲಾಮಾಬಾದ್:  ಭಾರತದ ಕುಲಭೂಷಣ್‌ ಜಾಧವ್‌ ಅವರಿಗೆ ಪಾಕಿಸ್ತಾನದ ಸೇನಾ ನ್ಯಾಯಾಲಯ ಮರಣದಂಡನೆ ವಿಧಿಸಿದ್ದು, ಈ ಕ್ರಮ ದೇಶದ ವಿರುದ್ಧ ಪಿತೂರಿ ನಡೆಸುತ್ತಿರುವವರಿಗೆ ಎಚ್ಚರಿಕೆಯಾಗಲಿ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್‌ ಹೇಳಿದರು.

ಪಾಕಿಸ್ತಾನದಲ್ಲಿ ಸೆರೆಯಲ್ಲಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್‌ ಜಾಧವ್‌ ಅವರಿಗೆ ಬೇಹುಗಾರಿಕೆ ನಡೆಸಿರುವ ಆರೋಪದಲ್ಲಿ ಅಲ್ಲಿನ ಸೇನಾ ನ್ಯಾಯಾಲಯ ಮರಣದಂಡನೆ ವಿಧಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್‌, ದೇಶದ ವಿರುದ್ಧ ಸಂಚು ರೂಪಿಸುತ್ತಿರುವವರಿಗೆ ಈ ಕ್ರಮ ಎಚ್ಚರಿಕೆಯಾಗಲಿ ಎಂದರು.

ಪಾಕಿಸ್ತಾನ ಭಯೋತ್ಪಾದನೆಯ ವಿರುದ್ಧ ಹೋರಾಡುತ್ತಿರುವುದು ಜಗತ್ತಿಗೆ ತಿಳಿದಿದೆ. ಭಾರತ ಸರ್ಕಾರದ ಅನುಮತಿ ಮೇರೆಗೆ  ಜಾಧವ್‌ ಪಾಕಿಸ್ತಾನ ಪ್ರವೇಶಿಸಿದ್ದಾರೆ. ಭಾರತವು ಪಾಕಿಸ್ತಾನದಲ್ಲಿ ಭಯೋತ್ಪಾದನೆಗೆ ನೀರೆರೆಯುತ್ತಿರುವುದರಲ್ಲಿ ಅನುಮಾನವಿಲ್ಲ ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT