ದೇವನಹಳ್ಳಿ: ರಾಜ್ಯದಲ್ಲಿ ಇದೇ 28ರಂದು ಬಿಡುಗಡೆ ಘೋಷಣೆ ಯಾಗಿರುವ ಬಾಹುಬಲಿ–2 ಚಲನ ಚಿತ್ರವನ್ನು ಯಾವುದೇ ಚಿತ್ರಮಂದಿರ ದಲ್ಲಿ ಬಿಡುಗಡೆಗೆ ಅವಕಾಶ ನೀಡುವು ದಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಪ್ರವೀಣ್ ಶೆಟ್ಟಿ ತಿಳಿಸಿದರು.
ದೇವನಹಳ್ಳಿ ಪಟ್ಟಣದಲ್ಲಿ ರಕ್ಷಣಾ ವೇದಿಕೆ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಈ ಹಿಂದೆ ಕಾವೇರಿ ಕುಡಿಯುವ ನೀರು ಹೋರಾಟ ನಡೆಸಿದ ಸಂದರ್ಭದಲ್ಲಿ ಬಾಹುಬಲಿ ಚಲನ ಚಿತ್ರ ನಟ ಸತ್ಯರಾಜ್ ಕನ್ನಡಿಗರನ್ನು ಕಾಡು ಮೃಗ, ನರಿ, ನಾಯಿಗಳಿಗೆ ಹೋಲಿಸಿ ಕಳಪೆ, ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ.
ಕನ್ನಡ ಚಳುವಳಿ ವಾಟಾಳ್ ನಾಗರಾಜ್ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ’ ಎಂದು ದೂರಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜ ಘಟ್ಟ ರವಿ ಮಾತನಾಡಿ, ಕನ್ನಡ ಭಾಷೆ, ನೆಲ, ಜಲ, ಗಡಿ ವಿಚಾರದಲ್ಲಿ ಅವಹೇಳನ ಸಹಿಸಲು ಸಾಧ್ಯವಿಲ್ಲ ಎಂದರು.
ವೇದಿಕೆಯ ರಾಜ್ಯ ಉಪಾಧ್ಯಕ್ಷ ಶಿವರಾಜ್ ಗೌಡ, ತಾಲ್ಲೂಕು ಕರವೇ ಗೌರವಾಧ್ಯಕ್ಷ ಎಸ್.ಪಿ. ಮುನಿರಾಜು, ಅಧ್ಯಕ್ಷ ಗಜೇಂದ್ರ, ಪ್ರಧಾನ ಕಾರ್ಯದರ್ಶಿ ಹರೀಶ್, ಮಹಿಳಾ ಘಟಕ ತಾಲ್ಲೂಕು ಅಧ್ಯಕ್ಷೆ ಗೌತಮಿ ಉಪಸ್ಥಿತರಿದ್ದರು.