ಬೆಂಗಳೂರು: ಆರ್ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಭುಜದ ನೋವಿನಿಂದ ಚೇತರಿಸಿಕೊಂಡಿದ್ದು, ಶುಕ್ರವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆಯುವ ಪಂದ್ಯದಲ್ಲಿ ಕಣಕ್ಕಿಳಿಯಲ್ಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.
ಏ.14ರಂದು ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ನಡೆಯುವ ಪಂದ್ಯದಲ್ಲಿ ಕೊಹ್ಲಿ ಆಡಲು ಸಮರ್ಥರಾಗಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ವೈದ್ಯರ ತಂಡ ಖಚಿತಪಡಿಸಿದೆ.