ಬಾಗಲಕೋಟೆ: ಬೀಳಗಿ ತಾಲ್ಲೂಕು ಶಿರಗುಪ್ಪಿಯ ಬಸಯ್ಯ ಮಠ ಅವರ ಕಬ್ಬಿನ ಗದ್ದೆಯಲ್ಲಿ ಆಶ್ರಯ ಪಡೆದಿದ್ದ ಮೊಸಳೆಯನ್ನು ಗುರುವಾರ ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
ಗ್ರಾಮದ ಬಳಿಯ ಘಟಪ್ರಭಾ ನದಿಯಿಂದ ಬೆಳಿಗ್ಗೆ ಗದ್ದೆಯತ್ತ ಬಂದಿದ್ದ ಅತಿಥಿಯನ್ನು ಕಂಡ ಬಸಯ್ಯ ಹಾಗೂ ಅಕ್ಕಪಕ್ಕದ ಜಮೀನುಗಳ ರೈತರು ಹಿಡಿದು ತೆಂಗಿನ ಮರಕ್ಕೆ ಕಟ್ಟಿ ಹಾಕಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.
ವಲಯ ಅರಣ್ಯಾಧಿಕಾರಿ ಹನುಮಂತ ಡೋಣಿ ನೇತೃತ್ವದಲ್ಲಿ ಸ್ಥಳಕ್ಕೆ ಬಂದ ಸಿಬ್ಬಂದಿ ಮೊಸಳೆಯನ್ನು ರಕ್ಷಿಸಿ ಟಂಟಂ ವಾಹನದಲ್ಲಿ ಕೊಂಡೊಯ್ದು ರೊಳ್ಳಿ ಸಮೀಪ ಆಲಮಟ್ಟಿ ಜಲಾಶಯದ ಹಿನ್ನೀರಿಗೆ ಬಿಟ್ಟು ಬಂದರು.