ಹನೂರು: ಕಾಡಂಚಿನ ಜಾನುವಾರು ಗಳು ನೀರು, ಮೇವಿನ ಕೊರತೆಯಿಂದ ಸಾವಿಗೀಡಾಗುತ್ತಿವೆ. ಇದರಿಂದ ಭಯಗೊಂಡಿರುವ ರೈತರು ಗೋವುಗಳನ್ನು ಕಸಾಯಿಖಾನೆಗೆ ಮಾರಾಟ ಮಾಡುತ್ತಿದ್ದಾರೆ. ಕೂಡಲೇ ಸರ್ಕಾರ ಕಾಡಂಚಿನ ಜಾನುವಾರುಗಳ ರಕ್ಷಣೆಗೆ ಮುಂದಾಗಬೇಕು ಎಂದು ರಾಮಚಂದ್ರಾಪುರಮಠದ ರಾಘವೇಶ್ವರ ಭಾರತಿ ಸ್ವಾಮೀಜಿ ಒತ್ತಾಯಿಸಿದರು.
ಸಮೀಪದ ಕೌದಳ್ಳಿ ಗ್ರಾಮದಲ್ಲಿ ಮಠದ ವತಿಯಿಂದ ತೆರೆಯಲಾಗಿರುವ ಗೋಶಾಲೆ ಪರಿಶೀಲನೆ ನಡೆಸಿ ರೈತರ ಜತೆ ಅವರು ಮಾತನಾಡಿದರು. ಬರಗಾಲದಿಂದ ಕಂಗೆಟ್ಟಿರುವ ಹನೂರು ಕ್ಷೇತ್ರ ವ್ಯಾಪ್ತಿಯಲ್ಲಿ ಮೇವಿನ ಕೊರತೆಯಿಂದ ಇಲ್ಲಿನ ಗೋವುಗಳು ಅಳಿವಿನ ಅಂಚಿನಲ್ಲಿವೆ.