ಕೊಡಿಯಾಲ, ಕರೇನಹಳ್ಳಿ ಗ್ರಾಮದ ಭಾಗ್ಯಮ್ಮ (43), ನೀಲಮ್ಮ (42), ದಾಸೇಗೌಡ (51), ನರಸಿಂಹಯ್ಯ (47) ಎಂಬುವರು ತೀವ್ರಗಾಗಿ ಗಾಯಗೊಂಡಿದ್ದು, ಕೆಂಗೇರಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದ ಸಂದರ್ಭ ಬಸ್ನಲ್ಲಿ ಸುಮಾರು 60 ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಘಟನೆ ನಂತರ ಚಾಲಕ ಪರಾರಿಯಾಗಿದ್ದಾನೆ.
ಸಿಬ್ಬಂದಿ ಕೊರತೆ: ಅಪಘಾತದ ಬಳಿಕ ಗಾಯಾಳುಗಳನ್ನು ಸ್ಥಳೀಯರ ಸಹಕಾರ ದೊಂದಿಗೆ ರಾಮನಗರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಲ್ಲಿ ಸಿಬ್ಬಂದಿ ಕೊರತೆಯಿಂದಾಗಿ ಗಾಯಾಳು ಗಳ ಸಂಬಂಧಿಕರು ಹಾಗೂ ಆಸ್ಪತ್ರೆ ಸಿಬ್ಬಂದಿ ನಡುವೆ ವಾಗ್ವಾದ ನಡೆಯಿತು.
ತೀವ್ರ ಗಾಯಗೊಂಡಿವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ರಾಜ ರಾಜೇಶ್ವರಿ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು.
ರಾಮನಗರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.