ಹುಬ್ಬಳ್ಳಿಯ ಡಾ. ಎಂ.ಎಂ.ಜೋಷಿ ಆಸ್ಪತ್ರೆ ಹಾಗೂ ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಸೋಮವಾರದಿಂದ ಬುಧವಾರದವರೆಗೆ ಒಟ್ಟು 425 ಜನರ ಕಣ್ಣಿನ ಪೊರೆ ತಪಾಸಣೆ ಮಾಡಲಾಗಿತ್ತು. ಮಧುಮೇಹ, ರಕ್ತದೊತ್ತಡ ಪರೀಕ್ಷೆ ಮಾಡಿ ಅವರಲ್ಲಿ 251 ಅರ್ಹರೋಗಿಗಳನ್ನು ಆಯ್ಕೆ ಮಾಡಲಾಗಿತ್ತು ಎಂದು ಆರೋಗ್ಯ ಕೇಂದ್ರದ ಡಾ. ವಿವೇಕ.ಸಿ.ಬಾಗೋಡಿ ತಿಳಿಸಿದರು.