ಸಕಲೇಶಪುರ: ತಾಲ್ಲೂಕಿನಲ್ಲಿ ಪ್ರಗತಿಯಲ್ಲಿರುವ ಎತ್ತಿನಹೊಳೆ ತಿರುವು ಯೋಜನೆ ಕಾಮಗಾರಿ ಸ್ಥಳಗಳಿಗೆ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಸುಮಾರು 200 ರೈತರು ಭೇಟಿ ಶನಿವಾರ ನೀಡಿ ಕಾಮಗಾರಿ ವೀಕ್ಷಿಸಿದರು.ಶಿಡ್ಲಘಟ್ಟ ತಾಲ್ಲೂಕು ಚಿಕ್ಕಬಳ್ಳಾಪುರ ಜಿಲ್ಲೆ ಹಾಗೂ ಬೆಂಗಳೂರು ಗ್ರಾಮಾಂತರ ಪ್ರದೇಶ, ಕೋಲಾರ ಭಾಗದ ರೈತರೂ ಕಾಮಗಾರಿ ಸ್ಥಳಕ್ಕೆ ತೆರಳಿ, ಎತ್ತಿನಹೊಳೆಯ ಸಾಧಕ ಬಾಧಕಗಳನ್ನು ತಿಳಿದುಕೊಂಡರು.