ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಎಲ್ಲ ಧರ್ಮಗಳ ಪ್ರಗತಿ ಬಿಜೆಪಿ ಗುರಿ’

Last Updated 16 ಏಪ್ರಿಲ್ 2017, 8:55 IST
ಅಕ್ಷರ ಗಾತ್ರ

ಚಿಟಗುಪ್ಪ: ಎಲ್ಲ ಧರ್ಮದವರ ಪ್ರಗತಿ ರಾಜಕೀಯ, ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಮುಖ್ಯವಾಗಿ ಆರ್ಥಿಕ ಕ್ಷೇತ್ರದಲ್ಲಿ ಆಗಬೇಕು ಎಂಬ ಗುರಿ ಬಿಜೆಪಿ ಪಕ್ಷದ್ದಾಗಿದೆ ಎಂದು ಮಾಜಿ ಶಾಸಕ ಸುಭಾಷ ಕಲ್ಲೂರ್ ಹೇಳಿದರು.

ಗುರುವಾರ ಸಮೀಪದ ಮುದನಾಳ ಗ್ರಾಮದಲ್ಲಿ ನಡೆದ ಬಿಜೆಪಿ ನಡೆ ದಲಿತರ ಕಡೆ ಕಾರ್ಯಕ್ರಮದಲ್ಲಿ ಮಾತನಾಡಿದರುದೇಶದಲ್ಲಿ ಎಲ್ಲ ಕ್ಷೇತ್ರಗಳಲ್ಲಿ ತಳ ಹಂತದಿಂದಲೇ ಸೂಕ್ತ ಪ್ರಗತಿ ಆಗಬೇಕು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಹಲವು ಮಹತ್ವದ ಯೋಜನೆಗಳು ರೂಪಿಸಿ ಜಾರಿಗೊಳಿಸುತ್ತಿದೆ. ಭ್ರಷ್ಟಾಚಾರ ಮುಕ್ತ ರಾಷ್ಟ್ರ ನಮ್ಮದಾಗಬೇಕು ಎಂಬ ಉದ್ದೇಶದಿಂದ ಪ್ರಧಾನ ಮಂತ್ರಿಯವರು ನಿರಂತರ ಶ್ರಮಿಸುತ್ತಿದ್ದಾರೆ. ಇದಕ್ಕೆ ನಾಗರಿಕರ ಸಹಕಾರ ಬೇಕು ಎಂದರು.

ಗ್ರಾಮದ ದಲಿತ ಮುಖಂಡ ಸುಶೀಲ ನೇತೃತ್ವದಲ್ಲಿ ಡಾ.ಅಂಬೇಡ್ಕರ್, ಡಾ.ಬಾಬು ಜಗಜೀವನರಾಂ ಅವರ ಜಯಂತಿ ಆಚರಿಸಲಾಯಿತು. ಬಿಜೆಪಿ ನಾಯಕ ಸೋಮನಾಥ ಪಾಟೀಲ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ವಿಶ್ವನಾಥ ಪಾಟೀಲ, ಶಿವಾನಂದ ಮಂಠಾಳಕರ್, ಜಿಲ್ಲಾ ಪಂಚಾಯಿತಿ ಸದಸ್ಯ ಗುಂಡುರೆಡ್ಡಿ, ಪುರಸಭೆ ಸದಸ್ಯರಾದ ಮಲ್ಲಿಕಾರ್ಜುನ ಪಾಟೀಲ, ಕ್ರಿಸ್ತಾನಂದ, ಪ್ರಭು ನಾಗರಾಳೆ, ಪ್ರಕಾಶ್, ಪ್ರವೀಣ, ಮಧುಕರ್, ರವಿ ಸ್ವಾಮಿ ಹೊಸಳ್ಳಿ, ರಮೇಶ್ ಕಲ್ಲೂರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT