ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾದಾಯಿ ವಿವಾದ ಇತ್ಯರ್ಥಕ್ಕೆ ಒತ್ತಾಯ

Last Updated 16 ಏಪ್ರಿಲ್ 2017, 9:56 IST
ಅಕ್ಷರ ಗಾತ್ರ

ಧಾರವಾಡ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಚ್ಚೆತ್ತುಕೊಂಡು ಕೂಡಲೇ ಮಹಾದಾಯಿ ವಿವಾದ ಇತ್ಯರ್ಥಪಡಿಸಬೇಕು ಎಂದು ರೈತ ಸೇನಾ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ವೀರೇಶ ಸೊಬರದಮಠ ಒತ್ತಾಯಿಸಿದರು.

640 ದಿನಗಳಿಂದ ಮಹಾದಾಯಿ ನೀರಿಗಾಗಿ ಈ ಭಾಗದ ಜನತೆ ನಿರಂತರ ಹೋರಾಟ ನಡೆಸುತ್ತಿದ್ದು, ನೀರು ಸಿಗುವ ತನಕ ಈ ಹೋರಾಟ ಮುಂದುವರಿಯಲಿದೆ. ಅಲ್ಲದೇ ನಾಲ್ಕು ಜಿಲ್ಲೆಗಳ ಸಂಸದರು ಬಿಜೆಪಿಯವರಾಗಿದ್ದು, ಅವರ ಪಕ್ಷವೇ ಕೇಂದ್ರದಲ್ಲಿ ಅಽಧಿಕಾರದಲ್ಲಿದೆ. ಹಾಗಾಗಿ ಜನರ ಸಂಕಷ್ಟ ಅರಿತು ತಕ್ಷಣವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒಳಗೊಂಡ ಸರ್ವಪಕ್ಷ ನಿಯೋಗದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿ ಈ ವಿವಾದಕ್ಕೆ ಇತಿಶ್ರೀ ಹಾಡಬೇಕು ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

ತಮ್ಮ ರಾಜಕೀಯ ಬೆಳೆ ಬೇಯಿಸಿಕೊಳ್ಳಲು ಈ ವಿವಾದವನ್ನು ಜೀವಂತವಾಗಿಟ್ಟಿರುವ ರಾಜಕೀಯ ಪಕ್ಷಗಳ  ಹಾಗೂ ರಾಜಕಾರಣಿಗಳ ಬಣ್ಣ ಬಯಲಾಗಿದೆ. ಇದರಿಂದ ಬೇಸತ್ತಿರುವ ಸಾರ್ವಜನಿಕರು ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವ ಮೊದಲೇ ಎಚ್ಚೆತ್ತುಕೊಂಡು ಕಳಸಾ-ಬಂಡೂರಿ ನಾಲಾ ಯೋಜನೆ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು. ಇಲ್ಲವಾದರೆ 4 ಜಿಲ್ಲೆಗಳ ಸಂಸದರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.ರೈತ ಸೇನಾದ ಪ್ರಧಾನ ಕಾರ್ಯದರ್ಶಿ ಶಂಕರಪ್ಪ ಅಂಬಲಿ ಮಾತನಾಡಿ, ಸರ್ಕಾರಗಳು ಪರಸ್ಪರ ಆರೋಪ ಮಾಡುವ ಬದಲು ಒಗ್ಗಟ್ಟಿನಿಂದ ವಿವಾದ ನಿವಾರಿಸಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT