ಜಾನಪದ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಡಾ.ಡಿ.ಬಿ.ನಾಯಕ ಮಾತನಾಡಿ, ‘ಜಾತ್ಯತೀತ ರಾಷ್ಟ್ರವೆಂದು ಹೇಳಿದರೂ ಜಾತಿಗಳು ಇಂದಿಗೂ ತಾಂಡವಾಡುತ್ತಿವೆ’ ಎಂದರು.ಡಾ.ಆರ್.ಎಸ್.ಅರಳೆಲೆಮಠ ಮಾತನಾಡಿದರು. ಜೈ ಭೀಮ್ ಪರಿಶಿಷ್ಟ ಜಾತಿ ಸಮಗ್ರ ಅಭಿವೃದ್ಧಿ ಸಂಸ್ಥೆ ಅಧ್ಯಕ್ಷ ಗುರು ಚಲವಾದಿ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಅಧ್ಯಕ್ಷೆ ಶಾಬಿರಾಭಿ ಯಲಗಚ್ಚ, ಸ್ಥಾಯಿ ಸಮಿತಿ ಅಧ್ಯಕ್ಷ ಉಮೇಶ ಮಾಳಗಿಮನಿ, ಮುಖ್ಯಾಧಿಕಾರಿ ಕುಮಾರ, ಶಿವಾನಂದ ಗೌಡರ ಇದ್ದರು.